ರಾಕಿಂಗ್ ಸ್ಟಾರ್ ಯಶ್ ರಾಜಮೌಳಿ ನಿರ್ದೇಶನದಲ್ಲಿ ಛತ್ರಪತಿ ಶಿವಾಜಿ ಪಾತ್ರ…ಆದ್ರೆ ನಿಜವಾದ ಸ್ಟೋರಿ ನೇ ಬೇರೆ..

ಕೆಜಿಎಫ್ ಸಿನಿಮಾ ಹಿಟ್ ಆಗುತ್ತಿದ್ದ ಹಾಗೆ ನಟ ಯಶ್ ಅವರ ಖದರ್ ಕೂಡಾ ಬದಲಾಗಿ ಹೋಗಿದೆ ಅಷ್ಟೇ ಅಲ್ಲ ಅವರ ಸಂಭಾವನೆ ಕೂಡ ದುಪ್ಪಟ್ಟು ಆಗಿದ್ದು ಎಲ್ಲೆಡೆ ರಾಕಿ ಭಾಯ್ ಅವರದ್ದೆ ಹವಾ. ಹೌದು ಸ್ವಲ್ಪ ದಿನಗಳಿಂದ ಅದರಲ್ಲಿಯೂ ಕೆಜಿಎಫ್ ಚಾಪ್ಟರ್ 2 ಸಿನಿಮಾ ರಿಲೀಸ್ ಆದ ಬಳಿಕ ಕೆಜಿಎಫ್ ಚಾಪ್ಟರ್ 3 ಸಿನೆಮಾ ಕುರಿತು ಜನರು ಬಹಳಷ್ಟು ಚರ್ಚೆಗಳನ್ನು ಮಾಡಿದರು ಮತ್ತು ಕೆಜಿಎಫ್ ಚಾಪ್ಟರ್ 3 ಸಿನಿಮಾ ಹೇಗೆ ಮೂಡಿಬರಬಹುದು ಅದರಲ್ಲಿ ಯಾರೆಲ್ಲ ನಟನೆ ಮಾಡಲಿದ್ದಾರೆ ಎಂಬುದರ ಕುರಿತು ಜನರು ಬಹಳಷ್ಟು ಕುತೂಹಲವನ್ನು ವ್ಯಕ್ತಪಡಿಸಿದ್ದರು. ಆದರೆ ಯಶ್ ಅವರ ಕುರಿತು ಇದೀಗ ಮತ್ತೊಂದು ವಿಚಾರ ಮೀಡಿಯಾಗಳಲ್ಲಿ ವೈರಲ್ ಆಗ್ತಾ ಇದ್ದು, ಈ ಕುರಿತು ಯಶ್ ಅವರು ಹೇಳಿರುವುದೇನು ಮತ್ತು ಯಶ್ ಅವರ ಮುಂದಿನ ಸಿನಿಮಾದ ಅಪ್ಡೇಟ್ಸ್ ಗಳೇನೂ ಎಲ್ಲವನ್ನ ತಿಳಿಯೋಣ ಬನ್ನಿ ಇವತ್ತಿನ ಈ ಲೇಖನದಲ್ಲಿ.

ಹೌದು ಕೆಜಿಎಫ್ ಚಾಪ್ಟರ್ ಹಿಟ್ ಆಗುತ್ತಿದ್ದ ಹಾಗೆ ಇನ್ನೇನೋ ಯಶ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ, ಎಲೆಕ್ಷನ್ ನಲ್ಲಿ ನಿಲ್ತಾರೆ ಅಂತ ಬಹಳಷ್ಟು ವಿಚಾರಗಳನ್ನು ಜನರು ತಮ್ಮಷ್ಟಕ್ಕೆ ತಾವೇ ಮಾತನಾಡುತ್ತಾ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗಳನ್ನು ಕೂಡ ಮಾಡುತ್ತಿದ್ದರು. ಆದರೆ ಅದ್ಯಾವುದರ ಕುರಿತು ತಲೆಕೆಡಿಸಿಕೊಳ್ಳದ ಯಶ್ ರಾಜಕೀಯ ಕುರಿತು ಯಾವುದೇ ತರಹದ ಅಧಿಕೃತ ಹೇಳಿಕೆಗಳನ್ನು ಕೂಡ ಕೊಟ್ಟಿರಲಿಲ್ಲ. ಆದರೆ ಅಭಿಮಾನಿಗಳು ಮಾತ್ರ ಯಶ್ ಅವರಿಗೆ ಕೇಳುತ್ತಿದ್ದ ಪ್ರಶ್ನೆಗಳು, ಮುಂದಿನ ಸಿನಿಮಾ ಯಾವುದು ಮುಂದೆ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತೀರಾ ಅಂತ. ಇತ್ತ ಯಶ್ ಅವರ ಕೆಜಿಎಫ್ ಸಿನಿಮಾ ಹಿಟ್ ಆಗುತ್ತಿದ್ದ ಹಾಗೆ ದೇಶದೆಲ್ಲೆಡೆ ಅವರಿಗೆ ಅಭಿಮಾನಿಗಳಾಗಿದ್ದಾರೆ.

ಇದೇ ಸಮಯದಲ್ಲಿ ಯಶ್ ಅವರಿಗೆ ಮಹಾರಾಷ್ಟ್ರದ ಅಭಿಮಾನಿಗಳು ತಮ್ಮ ನಾಯಕರಾಗಿರುವ ಛತ್ರಪತಿ ಶಿವಾಜಿ ಅವರ ಬಯೋಪಿಕ್ ಸಿನಿಮಾ ಮಾಡುವುದಾಗಿ ಕೇಳಿಕೊಂಡಿದ್ದರು ಹಾಗೆ ಅಭಿಮಾನಿಯೊಬ್ಬ ಶಿವಾಜಿ ಅವರ ರೂಪದಲ್ಲಿ ಯಶ್ ಅವರ ಪೇಂಟಿಂಗ್ ಮಾಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಕೂಡ. ಇಂತಹ ಬೆಳವಣಿಗೆಗಳು ಆಗುವಾಗಲೇ ಯಶ್ ಅವರು ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ಸಿನಿಮಾ ಮಾಡುತ್ತಿರುವುದಾಗಿ ಮತ್ತು ತಮ್ಮ ಮುಂದಿನ ಚಿತ್ರವನ್ನು ನರ್ತನ್ ನಿರ್ದೇಶನ ಮಾಡುತ್ತಿದ್ದಾರೆಂದು ಸುಳಿವು ಬಿಟ್ಟುಕೊಟ್ಟಿದ್ದು ಮುಂದೆ ನಟ ಯಶ್ ಅವರು ನಿಜವಾಗಿಯೂ ಛತ್ರಪತಿ ಶಿವಾಜಿ ಅವರ ಲೈಫ್ ಸ್ಟೋರಿ ಸಿನಿಮಾ ಮಾಡ್ತಾರಾ ಎಂಬುದನ್ನ ಜನರು ಕಾದು ನೋಡಬೇಕಿದೆ ಹಾಗೆ ಈ ವಿಚಾರಕ್ಕೆ ಪುಷ್ಟಿ ನೀಡುವಂತೆ ಸ್ವಲ್ಪ ತಿಂಗಳುಗಳ ಹಿಂದೆ ಯಶ್ ಮತ್ತು ಅವರ ಪತ್ನಿ ರಾಧಿಕಾ ಪಂಡಿತ್ ಅವರು ಗೋವಾ ಸಿಎಂ ಅನ್ನು ಕೂಡ ಭೇಟಿ ಮಾಡಿದ್ದರು. ಇದೇ ವೇಳೆ ಕೆವಿಎನ್ ಪ್ರೊಡಕ್ಷನ್ಸ್ ನ ಮುಖ್ಯಸ್ಥರಾಗಿರುವ ವೆಂಕಟ್ ಅವರ ಜೊತೆಗಿನ ಫೋಟೋವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೆಲ್ಲ ಗಮನಿಸಿದಾಗ ನಟ ಯಶ್ ಅವರು ಮುಂದೆ ಛತ್ರಪತಿ ಶಿವಾಜಿ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸುತ್ತಾರೆ ಎಂಬುದು ಎಲ್ಲೋ ಒಂದೆಡೆಯಿಂದ ದೃಢವಾಗಿದ್ದು, ಅಭಿಮಾನಿಗಳ ಆಸೆ ಏನೆಂದರೆ ಈ ಚಿತ್ರಕ್ಕೆ ನಿರ್ದೇಶಕರಾಗಿರುವ ರಾಜಮೌಳಿ ಅವರೆ ಆಕ್ಷನ್ ಕಟ್ ಹೇಳಬೇಕು ಅಂತ. ನಟ ಯಶ್ ಅವರು ಈ ಹಿಂದೆಯೇ ಕೆವಿಎನ್ ಪ್ರೊಡಕ್ಷನ್ಸ್ ಅವರ ಅಡಿಯಲ್ಲಿ ಮೂಡಿ ಬರುವ ಸಿನೆಮಾದಲ್ಲಿ ಮತ್ತು ನರ್ತನ್ ಅವರ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸಬೇಕು ಅಂತಿದ್ದರು. ಆದರೆ ಇದೀಗ ಅದಕ್ಕೆ ಸಮಯ ಕೂಡಿ ಬಂದಿದ್ದು ಛತ್ರಪತಿ ಶಿವಾಜಿ ಅವರ ಬಯೋಪಿಕ್ ಸಿನಿಮಾದಲ್ಲಿ ಯಶ್ ಅವರು ಅಭಿನಯ ಮಾಡ್ತಾರ ಎಂಬುದನ್ನ ಕಾದು ನೋಡಬೇಕಿದೆ. ಒಟ್ಟಾರೆಯಾಗಿ ಯಶ್ ಅಭಿಮಾನಿಗಳಿಗೆ ಮತ್ತೊಂದು ಶುಭ ಸುದ್ದಿ ಇರುವುದಂತೂ ಖಂಡಿತ.

san00037

Share
Published by
san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

1 week ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

1 week ago

This website uses cookies.